ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮಂಗಳೂರಿಗರಿಗೆ ಸದ್ಯಕ್ಕಿಲ್ಲ ನೀರಿನ ಕೊರತೆ

ಕರಾವಳಿಯಲ್ಲಿ ಈ ಬಾರಿ ತಾಪಮಾನ ಹಿಂದೆಂದಿಗಿಂತಲೂ ಅಧಿಕವಾಗಿದೆ. ಈ ಬಿರುಬೇಸಿಗೆಯಲ್ಲಿಯೂ ಮಂಗಳೂರು ನಗರದಲ್ಲಿ ಕುಡಿಯುವ ನೀರಿಗಿಲ್ಲ ಆತಂಕ ಎಂಬುದು ನೆಮ್ಮದಿಗೆ ಕಾರಣವಾಗಿದೆ.

ಸಾಧಾರಣವಾಗಿ ಮಂಗಳೂರು ನಗರಕ್ಕೆ ಏಪ್ರಿಲ್-ಮೇ ತಿಂಗಳಲ್ಲಿ ಕುಡಿಯವ ನೀರಿಗೆ ಬರ ಉಂಟಾಗುತ್ತದೆ. ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ರೇಶನಿಂಗ್ ಮಾಡುವ ಪ್ರಮೇಯ ಉಂಟಾಗುತ್ತದೆ.‌ ದಿನಬಿಟ್ಟು ದಿನ, ಎರಡು ದಿನಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ನೀರು ಪೂರೈಕೆಯ ಪರಿಣಾಮ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತದೆ.

ಆದರೆ ಈ ಬಾರಿ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರು ಲಭ್ಯತೆ ಹೇರಳವಾಗಿದೆ. ಅಲ್ಲದೇ ನೇತ್ರಾವತಿ ನದಿ ತೀರದುದ್ದಕ್ಕೂ ಇರುವ ಅಣೆಕಟ್ಟು ಗಳಲ್ಲಿ ನೀರಿನ ಸಂಗ್ರಹ ಸಾಕಷ್ಟಿದೆ. ಈ ಹಿಂದೆ ತುಂಬೆ ಅಣೆಕಟ್ಟು ಒಂದೇ ಕುಡಿಯುವ ನೀರಿನ ಸಂಗ್ರಹಕ್ಕೆ ಪ್ರಧಾನವಾಗಿತ್ತು. ಆದರೆ ಈಗ ಬಿಳಿಯೂರು, ಎಎಂಆರ್, ಜಕ್ರಿಬೆಟ್ಟು ಡ್ಯಾಮ್ ಗಳಲ್ಲಿ ನೀರಿನ ಶೇಖರಣೆ ಭರ್ತಿಯಾಗಿದೆ.

ಸಾಕಷ್ಟು ಭಾಗಗಳಲ್ಲಿ ನೇತ್ರಾವತಿ ನದಿ ತೀರದ ಕೃಷಿಕರು ತಮ್ಮ ಬೆಳೆಗಳಿಗೆ ನೇತ್ರಾವತಿ ನದಿ ತೀರವನ್ನೇ ಆಶ್ರಯಿಸಿದ್ದಾರೆ. ಬೇಸಿಗೆ ಕಾಲದಲ್ಲಿ ನೀರಿನ ಅಭಾವದ‌ ಸೂಚನೆ ಸಿಗುತ್ತಿದ್ದಂತೆಯೇ ಜಿಲ್ಲಾಡಳಿತ ಕೃಷಿಕರ ಪಂಪ್ ಸೆಟ್‌ಗಳ‌ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿತ್ತು. ಆದರೆ ಈ ಬಾರಿ ನದಿಯಲ್ಲಿ‌ ನೀರಿನ ಮಟ್ಟ ಬೇಕಾದಷ್ಟಿದ್ದು, ಕೃಷಿಕರೂ ನಿರಾಳರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಡ್ಯಾಂಗಳಲ್ಲಿ ಪ್ರಸ್ತುತ ಎಎಂಆರ್ ಡ್ಯಾಮ್‌ನಲ್ಲಿ 18.90 ಮೀ. ನೀರು, ತುಂಬೆ ಡ್ಯಾಮ್‌ನಲ್ಲಿ 5.70 ಮೀ. ನೀರು, ಹರೇಕಳ ಅಡ್ಯಾರ್ ಡ್ಯಾಮ್‌ನಲ್ಲಿ 1 ಮೀ. ನೀರು, ಬಿಳಿಯೂರು ಡ್ಯಾಮ್‌ನಲ್ಲಿ 4 ಮೀ. ನೀರು, ಜಕ್ರಿಬೆಟ್ಟು ಡ್ಯಾಮ್‌ನಲ್ಲಿ 3 ಮೀ. ನೀರು, ಮಳವೂರು ಡ್ಯಾಮ್‌ನಲ್ಲಿ 1.50 ಮೀ. ನೀರು, ಇರುವೈಲು ಡ್ಯಾಮ್‌ನಲ್ಲಿ 1.75 ಮೀ. ನೀರು ಲಭ್ಯವಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!