ಕರಾವಳಿಯಲ್ಲಿ ಈ ಬಾರಿ ತಾಪಮಾನ ಹಿಂದೆಂದಿಗಿಂತಲೂ ಅಧಿಕವಾಗಿದೆ. ಈ ಬಿರುಬೇಸಿಗೆಯಲ್ಲಿಯೂ ಮಂಗಳೂರು ನಗರದಲ್ಲಿ ಕುಡಿಯುವ ನೀರಿಗಿಲ್ಲ ಆತಂಕ ಎಂಬುದು ನೆಮ್ಮದಿಗೆ ಕಾರಣವಾಗಿದೆ.
ಸಾಧಾರಣವಾಗಿ ಮಂಗಳೂರು ನಗರಕ್ಕೆ ಏಪ್ರಿಲ್-ಮೇ ತಿಂಗಳಲ್ಲಿ ಕುಡಿಯವ ನೀರಿಗೆ ಬರ ಉಂಟಾಗುತ್ತದೆ. ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ರೇಶನಿಂಗ್ ಮಾಡುವ ಪ್ರಮೇಯ ಉಂಟಾಗುತ್ತದೆ. ದಿನಬಿಟ್ಟು ದಿನ, ಎರಡು ದಿನಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ನೀರು ಪೂರೈಕೆಯ ಪರಿಣಾಮ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತದೆ.
ಆದರೆ ಈ ಬಾರಿ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್ನಲ್ಲಿ ನೀರು ಲಭ್ಯತೆ ಹೇರಳವಾಗಿದೆ. ಅಲ್ಲದೇ ನೇತ್ರಾವತಿ ನದಿ ತೀರದುದ್ದಕ್ಕೂ ಇರುವ ಅಣೆಕಟ್ಟು ಗಳಲ್ಲಿ ನೀರಿನ ಸಂಗ್ರಹ ಸಾಕಷ್ಟಿದೆ. ಈ ಹಿಂದೆ ತುಂಬೆ ಅಣೆಕಟ್ಟು ಒಂದೇ ಕುಡಿಯುವ ನೀರಿನ ಸಂಗ್ರಹಕ್ಕೆ ಪ್ರಧಾನವಾಗಿತ್ತು. ಆದರೆ ಈಗ ಬಿಳಿಯೂರು, ಎಎಂಆರ್, ಜಕ್ರಿಬೆಟ್ಟು ಡ್ಯಾಮ್ ಗಳಲ್ಲಿ ನೀರಿನ ಶೇಖರಣೆ ಭರ್ತಿಯಾಗಿದೆ.
ಸಾಕಷ್ಟು ಭಾಗಗಳಲ್ಲಿ ನೇತ್ರಾವತಿ ನದಿ ತೀರದ ಕೃಷಿಕರು ತಮ್ಮ ಬೆಳೆಗಳಿಗೆ ನೇತ್ರಾವತಿ ನದಿ ತೀರವನ್ನೇ ಆಶ್ರಯಿಸಿದ್ದಾರೆ. ಬೇಸಿಗೆ ಕಾಲದಲ್ಲಿ ನೀರಿನ ಅಭಾವದ ಸೂಚನೆ ಸಿಗುತ್ತಿದ್ದಂತೆಯೇ ಜಿಲ್ಲಾಡಳಿತ ಕೃಷಿಕರ ಪಂಪ್ ಸೆಟ್ಗಳ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿತ್ತು. ಆದರೆ ಈ ಬಾರಿ ನದಿಯಲ್ಲಿ ನೀರಿನ ಮಟ್ಟ ಬೇಕಾದಷ್ಟಿದ್ದು, ಕೃಷಿಕರೂ ನಿರಾಳರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಡ್ಯಾಂಗಳಲ್ಲಿ ಪ್ರಸ್ತುತ ಎಎಂಆರ್ ಡ್ಯಾಮ್ನಲ್ಲಿ 18.90 ಮೀ. ನೀರು, ತುಂಬೆ ಡ್ಯಾಮ್ನಲ್ಲಿ 5.70 ಮೀ. ನೀರು, ಹರೇಕಳ ಅಡ್ಯಾರ್ ಡ್ಯಾಮ್ನಲ್ಲಿ 1 ಮೀ. ನೀರು, ಬಿಳಿಯೂರು ಡ್ಯಾಮ್ನಲ್ಲಿ 4 ಮೀ. ನೀರು, ಜಕ್ರಿಬೆಟ್ಟು ಡ್ಯಾಮ್ನಲ್ಲಿ 3 ಮೀ. ನೀರು, ಮಳವೂರು ಡ್ಯಾಮ್ನಲ್ಲಿ 1.50 ಮೀ. ನೀರು, ಇರುವೈಲು ಡ್ಯಾಮ್ನಲ್ಲಿ 1.75 ಮೀ. ನೀರು ಲಭ್ಯವಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…