ಚಲನಚಿತ್ರ

ಮಂಗಳೂರು : ಪಿದಾಯಿ ಮೇ 9 ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಮೇ 9ನೇ ತಾರೀಕಿನಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ.

ಪಿದಾಯಿ ಚಿತ್ರವು ಕೊಲ್ಕತ್ತ, ಶಿಮ್ಲಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆಯಾಗುವುದರ ಜೊತೆಗೆ, 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳ‌ಲ್ಲಿ ಸ್ಪರ್ಧೆಯಲ್ಲಿದ್ದು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಮಹಾಮಾಯಿ ಪಾತ್ರಿಯಾಗಿ ಕನ್ನಡದ ಖ್ಯಾತ ನಟರಾದ ಶರತ್ ಲೋಹಿತಾಶ್ವರವರು ಅಭಿನಯಿಸಿದ್ದಾರೆ. ಇವರ ಜೊತೆಗೆ ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೋಳಾರ್, ರೂಪಶ್ರೀ ವರ್ಕಾಡಿ, ಇಳಾ ವಿಟ್ಲ, ದೇವಿ ನಾಯರ್, ಪ್ರೀತೇಶ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ ಹಾಗೂ ಬಾಲ ಪ್ರತಿಭೆಗಳಾದ ಮೋನಿಶ್, ತ್ರಿಷ, ದ್ರುವ, ನಿಹಾ, ಖುಷಿ ಡಿಬಿಸಿ ಶೇಖರ್, ಅನಿತಾ ಚಂದ್ರಶೇಖರ್ ಮುಂತಾದವರು ಅಭಿನಯಿಸಿದ್ದಾರೆ.

ಈ ಸಿನಿಮಾದ ಛಾಯಾಗ್ರಾಹಣವನ್ನು ಉಣ್ಣಿ ಮಾಡವೂರ್‌ರವರು ನಿಭಾಯಿಸಿದ್ದಾರೆ. ಎರಡು ಸಲ ರಾಷ್ಟ್ರ ಪ್ರಶಸ್ತಿ ವಿಜೇತರಾಗಿ, ಅತೀ ಹೆಚ್ಚು ಸಿನಿಮಾ ಸಂಕಲನ ಮಾಡಿರುವ ಸುರೇಶ್ ಅರಸ್ ಇವರು ಈ ಚಿತ್ರಕ್ಕೆ ಸಂಕಲನಕಾರರಾಗಿದ್ದಾರೆ. ಸಂಭಾಷಣೆಯನ್ನು ರಮೇಶ್‌ ಶೆಟ್ಟಿಗಾರ್‌ ಹಾಗೂ ಡಿ.ಬಿ.ಸಿ ಶೇಖರ್‌ ಬರೆದಿದ್ದಾರೆ. ಚಿತ್ರವನ್ನು ದ.ಕ. ಜಿಲ್ಲೆಯ ಮುಡಿಪು ಹಾಗೂ ಮಂಜೇಶ್ವರದ ಗಡಿಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ.

ಪದ್ಮಶ್ರೀ ಕೈತಪ್ರಮ್ ದಾಮೋದರನ್ ನಂಬೂದಿರಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾದ ಸುಧೀರ್ ಅತ್ತಾವರ, ತುಳು ಅಕಾಡೆಮಿ ಪ್ರಶಸ್ತಿ ವಿಜೇತರಾದ ಕುಶಾಲಾಕ್ಷಿ ಕಣ್ವತೀರ್ಥರವರ ಸಾಹಿತ್ಯವಿದ್ದು, ಅಜಯ್ ನಂಬೂದಿರಿಯವರು ಸಂಗೀತ ನೀಡಿದ್ದಾರೆ. ಪ್ರಸಿದ್ದ ಹಾಡುಗಾರರಾದ ಸಂಗೀತ ವಿದ್ಯಾನಿಧಿ ಡಾಕ್ಟರ್ ವಿದ್ಯಾಭೂಷಣ್ ಪ್ರಪ್ರಥಮವಾಗಿ ಸಿನಿಮಾದಲ್ಲಿ ಹಾಡಿದ್ದಾರೆ ಎಂಬುದು ಇನ್ನೊಂದು ವಿಶೇಷತೆ. ಜೊತೆಗೆ ಹಿನ್ನಲೆ ಗಾಯಕರಾದ ಮೇಧ ವಿದ್ಯಾಭೂಷಣ್, ವಿಜೇಶ್ ಗೋಪಾಲ್ ಮುಂತಾದವರು ಕಂಠದಾನ ಮಾಡಿದ್ದಾರೆ. ಹಿನ್ನಲೆ ಸಂಗೀತವನ್ನು ಕೇರಳ ರಾಜ್ಯ ಪ್ರಶಸ್ತಿ ವಿಜೇತ ಸಂಗೀತಕಾರರಾದ ದೀಪಾಂಕುರನ್ ವಿಶೇಷ ಹಿನ್ನೆಲೆಯ ಸಂಗೀತವನ್ನು ನೀಡಿದ್ದಾರೆ. ಚಿತ್ರದ ಕಲಾನಿರ್ದೇಶಕರಾಗಿ ರಾಜೇಶ್ ಬಂದ್ಯೋಡು, ವಸ್ತ್ರವಿನ್ಯಾಸಕಾರರಾಗಿ ಮೀರಾ ಸಂತೋಷ್, ಮೇಕಪ್ ಮ್ಯಾನ್‌ ಆಗಿ ಬಿನೋಯ್ ಕೊಲ್ಲಮ್, ಮುಖ್ಯ ಸಹನಿರ್ದೇಶಕರಾಗಿ ವಿಘ್ನೇಶ್ ಕುಲಾಲ್, ಸಹ ನಿರ್ದೇಶಕರಾಗಿ ಗಿರೀಶ್ ಆಚಾರ್ ಸುಳ್ಯ, ಪ್ರದೀಪ್ ರಾವ್, ವಿಶ್ವ ಮಂಗಲ್ಪಾಡಿ, ತಂಡದ ಮ್ಯಾನೇಜರ್ ಆಗಿ ರವಿ ವರ್ಕಾಡಿ ಹಾಗೂ ಸ್ಥಿರ ಛಾಯಾಗ್ರಾಹಕರಾಗಿ ದೀಪಕ್‌ ಉಪ್ಪಳ ನಿರ್ವಹಿಸಿದ್ದಾರೆ.

ತುಳುನಾಡಿನ ವಿಶೇಷತೆಯಾದ ಕುಣಿತ ಭಜನೆಯನ್ನು ಮೊದಲ ಬಾರಿಗೆ ಈ ಸಿನಿಮಾದಲ್ಲಿ ಪ್ರಯೋಗಿಸಲಾಗಿದೆ. ಸಂದೀಪ್ ಬಲ್ಲಾಳ್ ಸಂಗೀತ ನೀಡಿದ ಕುಣಿತಭಜನೆಗೆ ಸಾಹಿತ್ಯ ಬರೆದವರು ಯೋಗೀಶ್ ಅಡಕಳಕಟ್ಟೆ. ಖ್ಯಾತ ಕವಿ ಅಡ್ವೋಕೇಟ್ ಶಶಿರಾಜ್ ಕಾವೂರವರು ಬರೆದ ಇನ್ನೊಂದು ಕುಣಿತ ಭಜನೆಗೆ ಶಿನೋಯ್ ಜೋಸೆಫ್ ಸಂಗೀತ ನೀಡಿದ್ದಾರೆ.

ಈ ಚಿತ್ರದಲ್ಲಿ “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಹಃ” ಎಂಬ ಉಲ್ಲೇಖದೊಂದಿಗೆ ಭೋಜಣ್ಣ ಎಂಬ ಮಹಮ್ಮಾಯಿ ಪಾತ್ರಿಯವರ ಮನೆಗೆ ವಿದ್ಯಾವಂತೆಯೊಬ್ಬಳು ಸೊಸೆಯಾಗಿ ಬಂದಾಗ, ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯನ್ನು ಕಂಡು ಅವಳು ನಡೆಸುವ ಸಾತ್ವಿಕ ಸಂಘರ್ಷ ಹಾಗೂ ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯಲು ಭೋಜಣ್ಣ ತೆಗೆದುಕೊಳ್ಳುವ ದೃಢನಿರ್ಧಾರವು ಕಥೆಯ ಜೀವಾಳವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಾಗ ವ್ಯಾಪಕವಾದ ಪ್ರಶಂಸೆಗೆ ಈ ಚಿತ್ರವು ಭಾಜನವಾಗಿತ್ತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

3 hours ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

4 hours ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

4 hours ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

4 hours ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

4 hours ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

4 hours ago