ಮಂಗಳೂರಿನ ಕುಡುಪು ಬಳಿ ಆದಿತ್ಯವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗುತ್ತಿದ್ದು, ಈತನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.
ಕುಡುಪು ಕಟ್ಟೆ ಬಳಿಯಲ್ಲಿ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಈ ಯುವಕ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹತ್ಯೆಗೀಡಾದ ವ್ಯಕ್ತಿ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ.
ಇನ್ನು ಘಟನೆ ನಡೆದ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…