ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30 ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೇ ಚಿನ್ನ ನೀಡಲು ಅವಕಾಶವಿದೆ. ಜತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದು. ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು. ಪಾರ್ಥಸಾರಥಿ ರಥವು ಸುಮಾರು 18 ಕೋ.ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ. ಭಕ್ತರು ತಮ್ಮ ಸೇವೆಯನ್ನು ಆನ್ಲೈನ್ ಮೂಲಕವೂ ಬುಕ್ ಮಾಡಬಹುದು. ಅಂಚೆ ಮೂಲಕವೂ ಪ್ರಸಾದ ಪಡೆಯಬಹುದು ಎಂದು ಅವರು ತಿಳಿಸಿದರು.
ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರಮೇಶ್ ಭಟ್ ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…