ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30 ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೇ ಚಿನ್ನ ನೀಡಲು ಅವಕಾಶವಿದೆ. ಜತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದು. ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು. ಪಾರ್ಥಸಾರಥಿ ರಥವು ಸುಮಾರು 18 ಕೋ.ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ. ಭಕ್ತರು ತಮ್ಮ ಸೇವೆಯನ್ನು ಆನ್ಲೈನ್ ಮೂಲಕವೂ ಬುಕ್ ಮಾಡಬಹುದು. ಅಂಚೆ ಮೂಲಕವೂ ಪ್ರಸಾದ ಪಡೆಯಬಹುದು ಎಂದು ಅವರು ತಿಳಿಸಿದರು.
ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರಮೇಶ್ ಭಟ್ ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…