ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ವಿರೋದಿಸಿ ವಿಮೆನ್ ಇಂಡಿಯ ಮೂವ್ಮೆಂಟ್ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಕಾರರು ಸರಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆಯಿಂದಾಗಿ ಜನತೆಯ ಮೇಲೆ ಆಗಿರುವ ಹೊರೆಯನ್ನು ಇಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಮ್ ಮಂಗಳೂರು ನಗರ ಜಿಲ್ಲಾದ್ಯಕ್ಷೆ ನಿಶಾ ವಾಮಂಜೂರು ಅವರು ‘ ಪ್ರಧಾನಿ ನರೇಂದ್ರ ಮೋದಿ ಅವರ ಸಬ್ಕ ಸಾಥ್ ಸಬ್ಕ ವಿಕಾಸ್ ಎಲ್ಲ ಬಕ್ವಾಸ್ ಎಂಬುದು ದೇಶದ ಜನರಿಗೆ ಈಗ ಅರ್ಥವಾಗಿದೆ. ಜನರಿಗೆ ಬದುಕಲು ಸಾಧ್ಯವಿಲ್ಲದಂತೆ ಅಗತ್ಯ ವಸ್ತುಗಳಿಗೆ ಕೇಂದ್ರ ಸರಕಾರ ಬೆಲೆ ಏರಿಸಿದೆ. ಕಾರ್ಪೋರೇಟ್ಗಳನ್ನು ಬೆಂಬಲಿಸುವ ಭರದಲ್ಲಿ ಜನಸಾಮನ್ಯರನ್ನು ಸರಕಾರ ಮರೆತಿದೆ ಎಂದರು.
ವಿಮೆನ್ ಇಂಡಿಯ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜೊತೆ ಕಾರ್ಯದರ್ಶಿ ಅಝ್ವೀನಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…