ಉಪನಿಷತ್ತ್, ಭಗವದ್ಗೀತೆ, ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು ಉಂಟಾಗುತ್ತದೆ. ದುಷ್ಟರ ನಾಶವಾಗಿ ಶಿಷ್ಟರ ರಕ್ಷಣೆಯ ಬಗ್ಗೆಯೂ ಯಕ್ಷಗಾನದಲ್ಲಿ ತಿಳಿಯುತ್ತದೆ ಎಂದು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದ್ದಾರೆ.
ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಗೆಜ್ಜೆಗಿರಿ ಮೇಳದವರಿಂದ ನಡೆದ ಯಕ್ಷೋತ್ಸವ 2025 ಕಾರ್ಯಕ್ರಮದ ಧಾರ್ಮಿಕ ಕಾಯಕ್ರಮದಲ್ಲಿ ಮಾತನಾಡಿ ನಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗ ಸದಾ ಪ್ರೇರಣೆ ನೀಡಲಿ ಎಂದರು.
ಇದೇ ಸಂದರ್ಭ ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ ಗಣಪತಿ ಭಟ್, ಉದ್ಯಮಿ ಭರತ್ ಅಂಚನ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…