ಉಪನಿಷತ್ತ್, ಭಗವದ್ಗೀತೆ, ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು ಉಂಟಾಗುತ್ತದೆ. ದುಷ್ಟರ ನಾಶವಾಗಿ ಶಿಷ್ಟರ ರಕ್ಷಣೆಯ ಬಗ್ಗೆಯೂ ಯಕ್ಷಗಾನದಲ್ಲಿ ತಿಳಿಯುತ್ತದೆ ಎಂದು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದ್ದಾರೆ.
ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಗೆಜ್ಜೆಗಿರಿ ಮೇಳದವರಿಂದ ನಡೆದ ಯಕ್ಷೋತ್ಸವ 2025 ಕಾರ್ಯಕ್ರಮದ ಧಾರ್ಮಿಕ ಕಾಯಕ್ರಮದಲ್ಲಿ ಮಾತನಾಡಿ ನಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗ ಸದಾ ಪ್ರೇರಣೆ ನೀಡಲಿ ಎಂದರು.
ಇದೇ ಸಂದರ್ಭ ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ ಗಣಪತಿ ಭಟ್, ಉದ್ಯಮಿ ಭರತ್ ಅಂಚನ್ ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…