ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಉಡುಪಿ ಜಿಲ್ಲೆ ಇದರ ಪ್ರಥಮ ವಾರ್ಷಿಕೋತ್ಸವ ಸಂಭ್ರಮ “ರಂಗ ಸಂಗಮ” ಇಂದು ದಿನಾಂಕ 16-07-2023 ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಹಿರಿಯ ಕಲಾವಿದರನ್ನು ಗೌರವಿಸಿದರು.

ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಹರಿಯಪ್ಪ ಕೋಟ್ಯಾನ್, ಉದ್ಯಮಿಗಳಾದ ಸಾಧು ಸಾಲ್ಯಾನ್, ಉಡುಪಿ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿಯ ಸಂಸ್ಥಾಪಕರಾದ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಪ್ರಧಾನ ಕಾರ್ಯದರ್ಶಿಗಳಾದ ಪಿ. ಪ್ರಭಾಕರ್ ಕಲ್ಯಾಣಿ ಉಪಸ್ಥಿತರಿದ್ದರು.




