ಜನ ಮನದ ನಾಡಿ ಮಿಡಿತ

Advertisement

ಜೈಪುರ : ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಪ್ರದರ್ಶನಕ್ಕೆ ಮನಸೋತ ತೆಂಡೂಲ್ಕರ್

ಜೈಪುರ: ಬಿಹಾರದ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ನಿರ್ಭೀತ ಬ್ಯಾಟಿಂಗ್‌ಗೆ ಇಡೀ ಕ್ರೀಡಾ ಜಗತ್ತೇ ಮನ ಸೋತಿದೆ. ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್‌ ಕೂಡ ಸೂರ್ಯವಂಶಿ ಬ್ಯಾಟಿಂಗ್‌ಗೆ ಮನಸೋತಿದ್ದಾರೆ. ‘ವೈಭವ್ ನಿರ್ಭಿತ ಬ್ಯಾಟಿಂಗ್ ಶೈಲಿ, ಬ್ಯಾಟ್ ಸ್ಪೀಡ್, ಲೆಂಗ್ತ್‌ ಆರಿಸಿಕೊಳ್ಳುವ ರೀತಿ ನೋಡುವುದೇ ಕಣ್ಣಿಗೆ ಹಬ್ಬ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂ. ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ ಅವರಿಗೆ 13 ವರ್ಷ ವಯಸ್ಸಾಗಿತ್ತು. ಹರಾಜಿನಲ್ಲೇ ಕ್ರಿಕೆಟ್‌ ಪ್ರೇಮಿಗಳ ಹುಬ್ಬೇರಿಸುವಂತೆ ಮಾಡಿದ್ದ ಈ ಪೋರ ಅತಿ ವೇಗದ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾನೆ.

ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ವೈಭವ್, ತಾವಾಡಿದ ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿ ತಾವೊಬ್ಬ ಅಪಾಯಕಾರಿ ಬ್ಯಾಟರ್‌ ಎನ್ನುವ ಸೂಚನೆ ನೀಡಿದ್ದರು. ಇದನ್ನೂ ಸಾಧಿಸಿಯೂ ತೋರಿಸಿದ್ದಾರೆ. ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ ಮೂಲಕ ವಿಶ್ವದರ್ಜೆಯ ಬೌಲರ್‌ಗಳಿಗೂ ಚಳಿ ಬಿಡಿಸಿದ್ದಾರೆ. ಅದರಲ್ಲೂ ಸಿಕ್ಸರ್‌ ಮೂಲಕವೇ ಶತಕ ಬಾರಿಸಿದ್ದು ಅವರ ರನ್‌ ದಾಹ ಎಷ್ಟರ ಮಟ್ಟಿಗೆ ಇದೆ ಎನ್ನುವುದು ಸಾಭೀತಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!