ಜನ ಮನದ ನಾಡಿ ಮಿಡಿತ

Advertisement

ಜೈಪುರ : ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಪ್ರದರ್ಶನಕ್ಕೆ ಮನಸೋತ ತೆಂಡೂಲ್ಕರ್

ಜೈಪುರ: ಬಿಹಾರದ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ನಿರ್ಭೀತ ಬ್ಯಾಟಿಂಗ್‌ಗೆ ಇಡೀ ಕ್ರೀಡಾ ಜಗತ್ತೇ ಮನ ಸೋತಿದೆ. ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್‌ ಕೂಡ ಸೂರ್ಯವಂಶಿ ಬ್ಯಾಟಿಂಗ್‌ಗೆ ಮನಸೋತಿದ್ದಾರೆ. ‘ವೈಭವ್ ನಿರ್ಭಿತ ಬ್ಯಾಟಿಂಗ್ ಶೈಲಿ, ಬ್ಯಾಟ್ ಸ್ಪೀಡ್, ಲೆಂಗ್ತ್‌ ಆರಿಸಿಕೊಳ್ಳುವ ರೀತಿ ನೋಡುವುದೇ ಕಣ್ಣಿಗೆ ಹಬ್ಬ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂ. ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ ಅವರಿಗೆ 13 ವರ್ಷ ವಯಸ್ಸಾಗಿತ್ತು. ಹರಾಜಿನಲ್ಲೇ ಕ್ರಿಕೆಟ್‌ ಪ್ರೇಮಿಗಳ ಹುಬ್ಬೇರಿಸುವಂತೆ ಮಾಡಿದ್ದ ಈ ಪೋರ ಅತಿ ವೇಗದ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾನೆ.

ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ವೈಭವ್, ತಾವಾಡಿದ ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿ ತಾವೊಬ್ಬ ಅಪಾಯಕಾರಿ ಬ್ಯಾಟರ್‌ ಎನ್ನುವ ಸೂಚನೆ ನೀಡಿದ್ದರು. ಇದನ್ನೂ ಸಾಧಿಸಿಯೂ ತೋರಿಸಿದ್ದಾರೆ. ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ ಮೂಲಕ ವಿಶ್ವದರ್ಜೆಯ ಬೌಲರ್‌ಗಳಿಗೂ ಚಳಿ ಬಿಡಿಸಿದ್ದಾರೆ. ಅದರಲ್ಲೂ ಸಿಕ್ಸರ್‌ ಮೂಲಕವೇ ಶತಕ ಬಾರಿಸಿದ್ದು ಅವರ ರನ್‌ ದಾಹ ಎಷ್ಟರ ಮಟ್ಟಿಗೆ ಇದೆ ಎನ್ನುವುದು ಸಾಭೀತಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!