ಜೈಪುರ: ಬಿಹಾರದ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ನಿರ್ಭೀತ ಬ್ಯಾಟಿಂಗ್ಗೆ ಇಡೀ ಕ್ರೀಡಾ ಜಗತ್ತೇ ಮನ ಸೋತಿದೆ. ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಕೂಡ ಸೂರ್ಯವಂಶಿ ಬ್ಯಾಟಿಂಗ್ಗೆ ಮನಸೋತಿದ್ದಾರೆ. ‘ವೈಭವ್ ನಿರ್ಭಿತ ಬ್ಯಾಟಿಂಗ್ ಶೈಲಿ, ಬ್ಯಾಟ್ ಸ್ಪೀಡ್, ಲೆಂಗ್ತ್ ಆರಿಸಿಕೊಳ್ಳುವ ರೀತಿ ನೋಡುವುದೇ ಕಣ್ಣಿಗೆ ಹಬ್ಬ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಕಳೆದ ವರ್ಷ ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂ. ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ ಅವರಿಗೆ 13 ವರ್ಷ ವಯಸ್ಸಾಗಿತ್ತು. ಹರಾಜಿನಲ್ಲೇ ಕ್ರಿಕೆಟ್ ಪ್ರೇಮಿಗಳ ಹುಬ್ಬೇರಿಸುವಂತೆ ಮಾಡಿದ್ದ ಈ ಪೋರ ಅತಿ ವೇಗದ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾನೆ.
ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ವೈಭವ್, ತಾವಾಡಿದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿ ತಾವೊಬ್ಬ ಅಪಾಯಕಾರಿ ಬ್ಯಾಟರ್ ಎನ್ನುವ ಸೂಚನೆ ನೀಡಿದ್ದರು. ಇದನ್ನೂ ಸಾಧಿಸಿಯೂ ತೋರಿಸಿದ್ದಾರೆ. ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ವಿಶ್ವದರ್ಜೆಯ ಬೌಲರ್ಗಳಿಗೂ ಚಳಿ ಬಿಡಿಸಿದ್ದಾರೆ. ಅದರಲ್ಲೂ ಸಿಕ್ಸರ್ ಮೂಲಕವೇ ಶತಕ ಬಾರಿಸಿದ್ದು ಅವರ ರನ್ ದಾಹ ಎಷ್ಟರ ಮಟ್ಟಿಗೆ ಇದೆ ಎನ್ನುವುದು ಸಾಭೀತಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…