ಜನ ಮನದ ನಾಡಿ ಮಿಡಿತ

Advertisement

ಮದೀನಾ ಮುನವ್ವರ: ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಹಜ್ಜಾಜಿಗಳಿಗೆ ಭವ್ಯ ಸ್ವಾಗತ

ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಹೊರಟ ಹಜ್ಜಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ.

ಇಂದು ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಅಲ್ಲಿಗೆ ತಲುಪಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು. ಇಂಡಿಯನ್ ಅಂಬಾಸಿಡರ್ ಡಾ. ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸುರಿ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು. ಕೆಸಿಎಫ್ ಹೆಚ್.ವಿ.ಸಿ. ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು.

ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ7.30 ವೇಳೆಗೆ ಮುಂಬೈಯಿಂದ 442ಹಾಜಿಗಳು ಹಾಜ್ ಯಾತ್ರೆ ತೆರಳಲಿದ್ದಾರೆ.

ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289 ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!