ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಹೊರಟ ಹಜ್ಜಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ.
ಇಂದು ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಅಲ್ಲಿಗೆ ತಲುಪಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು. ಇಂಡಿಯನ್ ಅಂಬಾಸಿಡರ್ ಡಾ. ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸುರಿ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು. ಕೆಸಿಎಫ್ ಹೆಚ್.ವಿ.ಸಿ. ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು.
ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ7.30 ವೇಳೆಗೆ ಮುಂಬೈಯಿಂದ 442ಹಾಜಿಗಳು ಹಾಜ್ ಯಾತ್ರೆ ತೆರಳಲಿದ್ದಾರೆ.
ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289 ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…