ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಹೊರಟ ಹಜ್ಜಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ.
ಇಂದು ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಅಲ್ಲಿಗೆ ತಲುಪಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು. ಇಂಡಿಯನ್ ಅಂಬಾಸಿಡರ್ ಡಾ. ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸುರಿ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು. ಕೆಸಿಎಫ್ ಹೆಚ್.ವಿ.ಸಿ. ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು.
ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ7.30 ವೇಳೆಗೆ ಮುಂಬೈಯಿಂದ 442ಹಾಜಿಗಳು ಹಾಜ್ ಯಾತ್ರೆ ತೆರಳಲಿದ್ದಾರೆ.
ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289 ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…