ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಹೊರಟ ಹಜ್ಜಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ.
ಇಂದು ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಅಲ್ಲಿಗೆ ತಲುಪಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು. ಇಂಡಿಯನ್ ಅಂಬಾಸಿಡರ್ ಡಾ. ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸುರಿ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು. ಕೆಸಿಎಫ್ ಹೆಚ್.ವಿ.ಸಿ. ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು.
ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ7.30 ವೇಳೆಗೆ ಮುಂಬೈಯಿಂದ 442ಹಾಜಿಗಳು ಹಾಜ್ ಯಾತ್ರೆ ತೆರಳಲಿದ್ದಾರೆ.
ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289 ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…