ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ರೆ ಕಥೆಯೇ ಬೇರೆಯಾಗುತ್ತಿತ್ತು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿದ್ದಾರೆ.
ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಒಂದೊoದು ತಲ್ವಾರ್ ಇಟ್ಟುಕೊಳ್ಳಲು ಕರೆ ನೀಡಿದ್ದಾರೆ. ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಪೌಡರ್, ಬಾಚಣಿಗೆ ಜೊತೆಗೆ ಚೂರಿ ಇಟ್ಟುಕೊಳ್ಳಿ. 6 ಇಂಚಿನ ಚೂರಿ ಇಟ್ಟುಕೊಳ್ಳಲು ಲೈಸೆನ್ಸ್ ಬೇಡ ಎಂದ ಅವರು, ಸಂಜೆ ಮೇಲೆ ಓಡಾಡಿ್ದರೆ ನಿಮ್ಮ ಮೇಲೆ ಖಂಡಿತಾ ಅಕ್ರಮಣ ಮಾಡುತ್ತಾರೆ, ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡರೆ ನಿಮ್ಮ ಕಥೆ ಮುಗಿತು, ಅದರ ಬದಲು ಚೂರಿ ತೋರಿಸಿ ಸಾಕು ಹೆದರಿ ಓಡುತ್ತಾರೆ ಎಂದರು.
ಈ ಹಿಂದೆ ಹಿಂದೂ ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಂರು ಹೊಡೀತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು, ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನು ಹೊಡಿಲಿಕ್ಕೆ ಶುರು ಮಾಡಲಿಲ್ಲ. ನಾವು ಎದ್ದು ನಿಲ್ಲಬೇಕು, ಮನೆಯಲ್ಲಿ ಒಂದು ಒಂದು ತಲ್ವಾರ್ ಇಟ್ಟುಕೊಳ್ಳಿ ಎಂದ ಕರೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…