ಜನ ಮನದ ನಾಡಿ ಮಿಡಿತ

Advertisement

ಮಂಡ್ಯ: ನಾಪತ್ತೆಯಾಗಿದ್ದ ತಂದೆ, ಮಕ್ಕಳ ಮೃತ ದೇಹಗಳು KRS​ ವಿಸಿ ನಾಲೆಯಲ್ಲಿ ಪತ್ತೆ

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಮಂಗಳವಾರ ಕೆ.ಆರ್.ಎಸ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂವರು ಅಪಘಾತದಿಂದ ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುವುದು ಇನ್ನೂ ನಿಗೂಢವಾಗಿದೆ. 

ಕುಮಾರಸ್ವಾಮಿ, ಅದ್ವೈತ್​ (7) ಮತ್ತು ಅಕ್ಷರ (3) ಮೃತ ದುರ್ದೈವಿಗಳು. ಮೃತ ಕುಮಾರಸ್ವಾಮಿಯವರು ಮೂಲತಃ ಮೈಸೂರಿನ ಕೆ.ಆರ್.ನಗರದ ಹೆಬ್ಬಾಳುದವರು. ಕಳೆದ ಕೆಲ ವರ್ಷಗಳಿಂದ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದರು. ಏಪ್ರಿಲ್​ 17 ರಂದು ಕೆ.ಆರ್.ನಗರಕ್ಕೆ ಹೋಗುವುದಾಗಿ ಪತ್ನಿಗೆ ಹೇಳಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಕುಮಾರಸ್ವಾಮಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದಾರೆ. ಆದರೆ, ಇಂದು ಆ ಮೂವರ ಮೃತ ದೇಹಗಳು ಕೆ.ಆರ್.ಎಸ್ ನಾರ್ಥ್ ಬ್ಯಾಂಕ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದ್ದು, ಇದು ಅಪಘಾತವೋ ಅಥವ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.

ಏಪ್ರಿಲ್​ 17 ರ ರಾತ್ರಿ 8 ಗಂಟೆ ವೇಳೆ ಕುಮಾರಸ್ವಾಮಿಯವರು ತಮ್ಮ ತಂದೆಗೆ ಪೋನ್ ಮಾಡಿ ತಾವು‌ ಕೆ.ಆರ್.ಎಸ್ ಬಳಿ‌ ಇದ್ದು ಊರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅದಾದ ಬಳಿಕ ಪೋನ್ ಸ್ವಿಚ್ ಆಫ್ ಆಗಿದೆ. ಈ ಬಳಿಕ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲ್ಲಿಸಿದಾಗ ಕಾರು ಪತ್ತೆಯಾಗಿದ್ದು, ಈ ವೇಳೆ ಮೂವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!