ಜನ ಮನದ ನಾಡಿ ಮಿಡಿತ

Advertisement

ಮಂಡ್ಯ: ನಾಪತ್ತೆಯಾಗಿದ್ದ ತಂದೆ, ಮಕ್ಕಳ ಮೃತ ದೇಹಗಳು KRS​ ವಿಸಿ ನಾಲೆಯಲ್ಲಿ ಪತ್ತೆ

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಮಂಗಳವಾರ ಕೆ.ಆರ್.ಎಸ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂವರು ಅಪಘಾತದಿಂದ ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುವುದು ಇನ್ನೂ ನಿಗೂಢವಾಗಿದೆ. 

ಕುಮಾರಸ್ವಾಮಿ, ಅದ್ವೈತ್​ (7) ಮತ್ತು ಅಕ್ಷರ (3) ಮೃತ ದುರ್ದೈವಿಗಳು. ಮೃತ ಕುಮಾರಸ್ವಾಮಿಯವರು ಮೂಲತಃ ಮೈಸೂರಿನ ಕೆ.ಆರ್.ನಗರದ ಹೆಬ್ಬಾಳುದವರು. ಕಳೆದ ಕೆಲ ವರ್ಷಗಳಿಂದ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದರು. ಏಪ್ರಿಲ್​ 17 ರಂದು ಕೆ.ಆರ್.ನಗರಕ್ಕೆ ಹೋಗುವುದಾಗಿ ಪತ್ನಿಗೆ ಹೇಳಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಕುಮಾರಸ್ವಾಮಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದಾರೆ. ಆದರೆ, ಇಂದು ಆ ಮೂವರ ಮೃತ ದೇಹಗಳು ಕೆ.ಆರ್.ಎಸ್ ನಾರ್ಥ್ ಬ್ಯಾಂಕ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದ್ದು, ಇದು ಅಪಘಾತವೋ ಅಥವ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.

ಏಪ್ರಿಲ್​ 17 ರ ರಾತ್ರಿ 8 ಗಂಟೆ ವೇಳೆ ಕುಮಾರಸ್ವಾಮಿಯವರು ತಮ್ಮ ತಂದೆಗೆ ಪೋನ್ ಮಾಡಿ ತಾವು‌ ಕೆ.ಆರ್.ಎಸ್ ಬಳಿ‌ ಇದ್ದು ಊರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅದಾದ ಬಳಿಕ ಪೋನ್ ಸ್ವಿಚ್ ಆಫ್ ಆಗಿದೆ. ಈ ಬಳಿಕ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲ್ಲಿಸಿದಾಗ ಕಾರು ಪತ್ತೆಯಾಗಿದ್ದು, ಈ ವೇಳೆ ಮೂವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!