ರಾಜ್ಯ

ಮಂಡ್ಯ: ನಾಪತ್ತೆಯಾಗಿದ್ದ ತಂದೆ, ಮಕ್ಕಳ ಮೃತ ದೇಹಗಳು KRS​ ವಿಸಿ ನಾಲೆಯಲ್ಲಿ ಪತ್ತೆ

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಮಂಗಳವಾರ ಕೆ.ಆರ್.ಎಸ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂವರು ಅಪಘಾತದಿಂದ ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುವುದು ಇನ್ನೂ ನಿಗೂಢವಾಗಿದೆ. 

ಕುಮಾರಸ್ವಾಮಿ, ಅದ್ವೈತ್​ (7) ಮತ್ತು ಅಕ್ಷರ (3) ಮೃತ ದುರ್ದೈವಿಗಳು. ಮೃತ ಕುಮಾರಸ್ವಾಮಿಯವರು ಮೂಲತಃ ಮೈಸೂರಿನ ಕೆ.ಆರ್.ನಗರದ ಹೆಬ್ಬಾಳುದವರು. ಕಳೆದ ಕೆಲ ವರ್ಷಗಳಿಂದ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದರು. ಏಪ್ರಿಲ್​ 17 ರಂದು ಕೆ.ಆರ್.ನಗರಕ್ಕೆ ಹೋಗುವುದಾಗಿ ಪತ್ನಿಗೆ ಹೇಳಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಕುಮಾರಸ್ವಾಮಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದಾರೆ. ಆದರೆ, ಇಂದು ಆ ಮೂವರ ಮೃತ ದೇಹಗಳು ಕೆ.ಆರ್.ಎಸ್ ನಾರ್ಥ್ ಬ್ಯಾಂಕ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದ್ದು, ಇದು ಅಪಘಾತವೋ ಅಥವ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.

ಏಪ್ರಿಲ್​ 17 ರ ರಾತ್ರಿ 8 ಗಂಟೆ ವೇಳೆ ಕುಮಾರಸ್ವಾಮಿಯವರು ತಮ್ಮ ತಂದೆಗೆ ಪೋನ್ ಮಾಡಿ ತಾವು‌ ಕೆ.ಆರ್.ಎಸ್ ಬಳಿ‌ ಇದ್ದು ಊರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅದಾದ ಬಳಿಕ ಪೋನ್ ಸ್ವಿಚ್ ಆಫ್ ಆಗಿದೆ. ಈ ಬಳಿಕ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲ್ಲಿಸಿದಾಗ ಕಾರು ಪತ್ತೆಯಾಗಿದ್ದು, ಈ ವೇಳೆ ಮೂವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿವೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago