ರಾಜ್ಯ

ಮಂಡ್ಯ: ನಾಪತ್ತೆಯಾಗಿದ್ದ ತಂದೆ, ಮಕ್ಕಳ ಮೃತ ದೇಹಗಳು KRS​ ವಿಸಿ ನಾಲೆಯಲ್ಲಿ ಪತ್ತೆ

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಮಂಗಳವಾರ ಕೆ.ಆರ್.ಎಸ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂವರು ಅಪಘಾತದಿಂದ ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುವುದು ಇನ್ನೂ ನಿಗೂಢವಾಗಿದೆ. 

ಕುಮಾರಸ್ವಾಮಿ, ಅದ್ವೈತ್​ (7) ಮತ್ತು ಅಕ್ಷರ (3) ಮೃತ ದುರ್ದೈವಿಗಳು. ಮೃತ ಕುಮಾರಸ್ವಾಮಿಯವರು ಮೂಲತಃ ಮೈಸೂರಿನ ಕೆ.ಆರ್.ನಗರದ ಹೆಬ್ಬಾಳುದವರು. ಕಳೆದ ಕೆಲ ವರ್ಷಗಳಿಂದ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದರು. ಏಪ್ರಿಲ್​ 17 ರಂದು ಕೆ.ಆರ್.ನಗರಕ್ಕೆ ಹೋಗುವುದಾಗಿ ಪತ್ನಿಗೆ ಹೇಳಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಕುಮಾರಸ್ವಾಮಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದಾರೆ. ಆದರೆ, ಇಂದು ಆ ಮೂವರ ಮೃತ ದೇಹಗಳು ಕೆ.ಆರ್.ಎಸ್ ನಾರ್ಥ್ ಬ್ಯಾಂಕ್​ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದ್ದು, ಇದು ಅಪಘಾತವೋ ಅಥವ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.

ಏಪ್ರಿಲ್​ 17 ರ ರಾತ್ರಿ 8 ಗಂಟೆ ವೇಳೆ ಕುಮಾರಸ್ವಾಮಿಯವರು ತಮ್ಮ ತಂದೆಗೆ ಪೋನ್ ಮಾಡಿ ತಾವು‌ ಕೆ.ಆರ್.ಎಸ್ ಬಳಿ‌ ಇದ್ದು ಊರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅದಾದ ಬಳಿಕ ಪೋನ್ ಸ್ವಿಚ್ ಆಫ್ ಆಗಿದೆ. ಈ ಬಳಿಕ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲ್ಲಿಸಿದಾಗ ಕಾರು ಪತ್ತೆಯಾಗಿದ್ದು, ಈ ವೇಳೆ ಮೂವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿವೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

10 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

10 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

15 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

16 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

16 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

16 hours ago