12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಮಂಗಳವಾರ ಕೆ.ಆರ್.ಎಸ್ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂವರು ಅಪಘಾತದಿಂದ ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುವುದು ಇನ್ನೂ ನಿಗೂಢವಾಗಿದೆ.
ಕುಮಾರಸ್ವಾಮಿ, ಅದ್ವೈತ್ (7) ಮತ್ತು ಅಕ್ಷರ (3) ಮೃತ ದುರ್ದೈವಿಗಳು. ಮೃತ ಕುಮಾರಸ್ವಾಮಿಯವರು ಮೂಲತಃ ಮೈಸೂರಿನ ಕೆ.ಆರ್.ನಗರದ ಹೆಬ್ಬಾಳುದವರು. ಕಳೆದ ಕೆಲ ವರ್ಷಗಳಿಂದ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದರು. ಏಪ್ರಿಲ್ 17 ರಂದು ಕೆ.ಆರ್.ನಗರಕ್ಕೆ ಹೋಗುವುದಾಗಿ ಪತ್ನಿಗೆ ಹೇಳಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಕುಮಾರಸ್ವಾಮಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದಾರೆ. ಆದರೆ, ಇಂದು ಆ ಮೂವರ ಮೃತ ದೇಹಗಳು ಕೆ.ಆರ್.ಎಸ್ ನಾರ್ಥ್ ಬ್ಯಾಂಕ್ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದ್ದು, ಇದು ಅಪಘಾತವೋ ಅಥವ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.
ಏಪ್ರಿಲ್ 17 ರ ರಾತ್ರಿ 8 ಗಂಟೆ ವೇಳೆ ಕುಮಾರಸ್ವಾಮಿಯವರು ತಮ್ಮ ತಂದೆಗೆ ಪೋನ್ ಮಾಡಿ ತಾವು ಕೆ.ಆರ್.ಎಸ್ ಬಳಿ ಇದ್ದು ಊರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅದಾದ ಬಳಿಕ ಪೋನ್ ಸ್ವಿಚ್ ಆಫ್ ಆಗಿದೆ. ಈ ಬಳಿಕ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲ್ಲಿಸಿದಾಗ ಕಾರು ಪತ್ತೆಯಾಗಿದ್ದು, ಈ ವೇಳೆ ಮೂವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿವೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…