ಜನ ಮನದ ನಾಡಿ ಮಿಡಿತ

Advertisement

ಬಿಹಾರ : ರೈಲು ನಿಲ್ದಾಣದಲ್ಲಿ ಕುಳಿತಿದ್ದ ಯುವತಿಯ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ದಿವಾಂಗ ತಂದೆಯೊಂದಿಗೆ ರೈಲ್ವೆ ನಿಲ್ದಾಣದಲ್ಲಿದ್ದಾಗ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ತಂದೆಗೆ ಚಿಕಿತ್ಸೆ ಕೊಡಿಸಲೆಂದು ಆಕೆ ತೆರಳುತ್ತಿದ್ದಳು. ರೈಲ್ವೆ ನಿಲ್ದಾಣದಲ್ಲಿ ತಂದೆಯೊಂದಿಗೆ ಕುಳಿತಿದ್ದಾಗ ಅತ್ಯಾಚಾರವೆಸಗಲಾಗಿದೆ. ಕುಚಾಯ್ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಸಾ ಮುಸಾ ರೈಲು ನಿಲ್ದಾಣದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸಂತ್ರಸ್ತೆ ವೈದ್ಯಕೀಯ ಚಿಕಿತ್ಸೆಗಾಗಿ ತನ್ನ ತಂದೆಯೊಂದಿಗೆ ಗೋಪಾಲ್‌ಗಂಜ್‌ಗೆ ಬಂದಿದ್ದರು. ಶ್ಯಾಮ್‌ಪುರದ ಸ್ಥಳೀಯ ವೈದ್ಯರ ಚಿಕಿತ್ಸಾಲಯದಲ್ಲಿ ಆಕೆಯ ತಂದೆ ಚಿಕಿತ್ಸೆ ಪಡೆದ ನಂತರ, ಭಾನುವಾರ ರಾತ್ರಿ ಅವರೊಂದಿಗೆ ಸಸಮುಸಾ ರೈಲ್ವೆ ನಿಲ್ದಾಣಕ್ಕೆ ಮರಳಿದರು ಆದರೆ ಇವರು ತಲುಪುವುದು ಸ್ವಲ್ಪ ತಡವಾದ ಪರಿಣಾಮ ರೈಲು ಕೈ ತಪ್ಪಿದೆ.

ರಾತ್ರಿಯಿಡೀ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಯುವತಿ ನೀರು ತರಲು ಹೋದಾಗ, ಹೊಂಚು ಹಾಕಿ ಕುಳಿತಿದ್ದ ಮೂವರು ಆಕೆಯ ಬಾಯಿ ಮುಚ್ಚಿ ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹಲ್ಲೆಯ ನಂತರ ದಾಳಿಕೋರರು ಪರಾರಿಯಾಗಿದ್ದು, ಯುವತಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಆಕೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಚಾಯ್ಕೋಟ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಆಕೆಯ ಗುರುತಿನ ಆಧಾರದ ಮೇಲೆ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಶಂಕಿತರನ್ನು ಬಂಧಿಸಲು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಸಂತ್ರಸ್ತೆಯನ್ನು ಚಿಕಿತ್ಸೆ ಮತ್ತು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ್‌ಗಂಜ್‌ನ ಎಸ್‌ಪಿ ಅವಧೇಶ್, ದೀಕ್ಷಿತ್ ಬಂಧನವನ್ನು ದೃಢಪಡಿಸಿದರು. ಇತರ ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಪೊಲೀಸರು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ಸಹಾಯದಿಂದ ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!