ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಳಗಾವಿ : BJP ಆಡಳಿತದಲ್ಲೇ ಭಾರತದ ಮೇಲೆ ಉಗ್ರರ ದಾಳಿ ಹೆಚ್ಚು ಎಂದ ಸುರ್ಜೇವಾಲಾ

ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್‌ ಮೇಲೆ ದಾಳಿ, ವಿಮಾನ ಹೈಜಾಕ್‌ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್‌ ಕೋಟ್‌ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್‌ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್‌ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್‌ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್‌ಕೋಟ್ ದಾಳಿ ತನಿಖೆಗೆ ಐಎಸ್‌ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.

ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್‌ಐಗೆ ಲಿಂಕ್ ಇದೆ‌‌. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್‌ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್‌ಎಸ್‌ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್‌ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!