ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ : BJP ಆಡಳಿತದಲ್ಲೇ ಭಾರತದ ಮೇಲೆ ಉಗ್ರರ ದಾಳಿ ಹೆಚ್ಚು ಎಂದ ಸುರ್ಜೇವಾಲಾ

ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್‌ ಮೇಲೆ ದಾಳಿ, ವಿಮಾನ ಹೈಜಾಕ್‌ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್‌ ಕೋಟ್‌ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್‌ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್‌ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್‌ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್‌ಕೋಟ್ ದಾಳಿ ತನಿಖೆಗೆ ಐಎಸ್‌ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.

ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್‌ಐಗೆ ಲಿಂಕ್ ಇದೆ‌‌. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್‌ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್‌ಎಸ್‌ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್‌ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!