ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ : BJP ಆಡಳಿತದಲ್ಲೇ ಭಾರತದ ಮೇಲೆ ಉಗ್ರರ ದಾಳಿ ಹೆಚ್ಚು ಎಂದ ಸುರ್ಜೇವಾಲಾ

ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್‌ ಮೇಲೆ ದಾಳಿ, ವಿಮಾನ ಹೈಜಾಕ್‌ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್‌ ಕೋಟ್‌ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್‌ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್‌ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್‌ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್‌ಕೋಟ್ ದಾಳಿ ತನಿಖೆಗೆ ಐಎಸ್‌ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.

ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್‌ಐಗೆ ಲಿಂಕ್ ಇದೆ‌‌. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್‌ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್‌ಎಸ್‌ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್‌ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!