ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್ ಮೇಲೆ ದಾಳಿ, ವಿಮಾನ ಹೈಜಾಕ್ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್ ಕೋಟ್ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್ಕೋಟ್ ದಾಳಿ ತನಿಖೆಗೆ ಐಎಸ್ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.
ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್ಐಗೆ ಲಿಂಕ್ ಇದೆ. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್ಎಸ್ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…