ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್ ಮೇಲೆ ದಾಳಿ, ವಿಮಾನ ಹೈಜಾಕ್ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್ ಕೋಟ್ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್ಕೋಟ್ ದಾಳಿ ತನಿಖೆಗೆ ಐಎಸ್ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.
ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್ಐಗೆ ಲಿಂಕ್ ಇದೆ. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್ಎಸ್ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…