ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಜವಾಬ್ದಾರಿಯುತ ನಿರ್ಣಯ ಕೈಗೊಳ್ಳುವಂತೆ ಉಭಯ ರಾಷ್ಟ್ರಗಳಿಗೆ ಅಮೇರಿಕಾ ಒತ್ತಾಯ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ “ಜವಾಬ್ದಾರಿಯುತ ನಿರ್ಣಯ” ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಒತ್ತಾಯಿಸಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಉಭಯ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಿ ಬಿಕ್ಕಟ್ಟಿಗೆ ಜವಾಬ್ದಾರಿಯುತ ಪರಿಹಾರ ಕಾಣಬೇಕು ಎಂದು ಅಮೆರಿಕಾ ಬಯಸುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಅಮೆರಿಕಾ ಭಾರತದ ಪರ ನಿಲ್ಲುತ್ತದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!