ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ನೇತ್ರಾವತಿ ನದಿ ಸೇರುತ್ತಿದೆ ಕೊಳಚೆ ನೀರು

ನೇತ್ರಾವತಿ ನದಿಗೆ ಕಲುಷಿತ ನೀರು ಸೇರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಈ ಕುರಿತು ಬಿತ್ತರವಾದ ವರದಿಗಳನ್ನು ಗಮನಿಸಿ, ಮಂಗಳೂರಿನ ಜಾಗೃತ ಹಿರಿಯ ನಾಗರಿಕರ ತಂಡವೊಂದು ಬಂಟ್ವಾಳದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತು. ಪ್ರತ್ಯಕ್ಷ ಭೇಟಿ ಸಂದರ್ಭ ನದಿಯ ಒಡಳಿಗೆ ತ್ಯಾಜ್ಯ ಸೇರುವುದನ್ನು ಗಮನಿಸಿದ ತಂಡ, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಂಗಳೂರಿಗರು ಕುಡಿಯುವ ತುಂಬೆ ನೀರಿಗೆ ಕೊಳಚೆ ನೀರು ಸೇರುತ್ತಿದೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಬಡ್ಡೆಕಟ್ಟೆ ಕೆಳಗಿನಪೇಟೆ, ಕಂಚಿ ಗಾರಪೇಟೆ, ಗೂಡಿನ ಬಳ್ಳಿ ಕೈಕುಂಜೆ ಪಾಣೆಮಂಗಳೂರು ಬರಲಿಯ ತಲಪಾಡಿ ಮುಂತಾದ ಸುಮಾರು 20ಕ್ಕೂ ಅಧಿಕ ಕಡೆಗಳಲ್ಲಿ ಮೋರಿ ಮತ್ತು ಕಾಲುವೆಗಳ ಮೂಲಕ ಕುಡಿಯುವ ನೀರಿಗೆ ಕೊಳಚೆ ನೀರು ಸೇರುತ್ತಿದೆ. ಜೊತೆಗೆ ವಸತಿ ಸಮುಚ್ಛಯಗಳ ಶೌಚಾಲಯಗಳ ನೀರು, ಹೋಟೆಲ್ ತ್ಯಾಜ್ಯಗಳು, ಕೋಳಿ ಸಹಿತ ಮಾಂಸದ ಅಂಗಡಿಗಳ ಕೊಳಚೆ ನೀರು ನದಿ ಸೇರುತ್ತಿದೆ. ನಾವು ಕೆಲವರು ಬಂಟ್ವಾಳದ ಎರಡು ಮೂರು ಕಡೆಗಳಲ್ಲಿ ಹೋಗಿ ಕೊಳಚೆ ನೀರು ನೇತ್ರಾವತಿ ನದಿ ಸೇರುವುದನ್ನು ಕಂಡಿರುತ್ತೇವೆ. ಇದು ನಿಜವಾಗಿಯೂ ಬಹಳ ಆತಂಕಕಾರಿ ಸಂಗತಿ. ಮಂಗಳೂರು ನಗರ ಬೆಳೆಯುತ್ತಿದ್ದು, ಸುಮಾರು ಎಂಟು ಲಕ್ಷ ನಾಗರಿಕರಿದ್ದು ಇಂತಹ ಪರಿಸ್ಥಿತಿಯಲ್ಲಿ ಮುಂದಿನ ದಿನಗಳಲ್ಲಿ ಜನರ ಆರೋಗ್ಯದಲ್ಲಿ ನೇರ ಪರಿಣಾಮವಾಗಬಹುದು. ನೇತ್ರಾವತಿ ನೀರಿಗೆ ಕೊಳಚೆ ನೀರು ಸೇರುವುದರಿಂದ ಬಹುಶ ನದಿ ನೀರನ್ನು ಎರಡೆರಡು ಸಲ ಶುದ್ಧೀಕರಿಸಬಹುದು. ಆದರೆ, ಕೊಳೆಕೆ ನೀರು ನೇತ್ರಾವತಿ ನದಿಯ ಮಡಿಲು ಸೇರುವುದರಿಂದ ನಾಗರಿಕರಿಗೆ ತಾವು ಕುಡಿಯುವ ನೀರು ಕೊಳಚೆ ನೀರು ಎಂದು ಮನಪಟಲದಲ್ಲಿ ನಿಲ್ಲುತ್ತದೆ. ಈಗಾಗಲೇ ಸಾಕಷ್ಟು ಚರ್ಚೆಗಳು ಈ ಕುರಿತು ನಡೆದಿದ್ದು, ಕೊಳಚೆ ನೀರು ತ್ಯಾಜ್ಯ ಸೇರುವುದು ಇನ್ನು ನಿಂತಿಲ್ಲ. ಜನರ ಹಿತ ದೃಷ್ಟಿಯಿಂದ ಮತ್ತು ಉತ್ತಮ ಆರೋಗ್ಯದ ದೃಷ್ಟಿಯಿಂದ ಜನನಾಯಕರು ಮತ್ತು ಹಿರಿಯ ಅಧಿಕಾರಿಗಳು ಸೇರಿ ಬಂಟ್ವಾಳ ಮತ್ತು ಆಸುಪಾಸಿನಲ್ಲಿ ನದಿ ಸೇರುವಂತಹ ಕೊಳಚೆ ನೀರು ಮತ್ತು ತ್ಯಾಜ್ಯವನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಈ ಕುರಿತು ಪರಿಹಾರವನ್ನೂ ಅವರ ತಂಡ ಸೂಚಿಸಿದ್ದು, ಬಂಟ್ವಾಳ ಮತ್ತು ಆಸುಪಾಸಿನ ಪ್ರದೇಶಗಳನ್ನು ಸಂಪೂರ್ಣವಾಗಿ ಒಳಚರಂಡಿ ವ್ಯವಸ್ಥೆಗೆ ಒಳಪಡಿಸುವುದು ಅಥವಾ ದೊಡ್ಡ ದೊಡ್ಡ ಇಂಗು ಗುಂಡಿಗಳನ್ನು ಮಾಡಿ ಕೊಳಚೆ ನೀರು ಮತ್ತು ತ್ಯಾಜ್ಯಗಳನ್ನು ಅದಕ್ಕೆ ಬಿಡುವುದು ಜೊತೆಗೆ ನೇತ್ರಾವತಿ ನದಿ ನೀರು ಕಲುಷಿತವಾಗದಂತೆ ನೋಡುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!