ನೇತ್ರಾವತಿ ನದಿಗೆ ಕಲುಷಿತ ನೀರು ಸೇರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಈ ಕುರಿತು ಬಿತ್ತರವಾದ ವರದಿಗಳನ್ನು ಗಮನಿಸಿ, ಮಂಗಳೂರಿನ ಜಾಗೃತ ಹಿರಿಯ ನಾಗರಿಕರ ತಂಡವೊಂದು ಬಂಟ್ವಾಳದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತು. ಪ್ರತ್ಯಕ್ಷ ಭೇಟಿ ಸಂದರ್ಭ ನದಿಯ ಒಡಳಿಗೆ ತ್ಯಾಜ್ಯ ಸೇರುವುದನ್ನು ಗಮನಿಸಿದ ತಂಡ, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಮಂಗಳೂರಿಗರು ಕುಡಿಯುವ ತುಂಬೆ ನೀರಿಗೆ ಕೊಳಚೆ ನೀರು ಸೇರುತ್ತಿದೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಬಡ್ಡೆಕಟ್ಟೆ ಕೆಳಗಿನಪೇಟೆ, ಕಂಚಿ ಗಾರಪೇಟೆ, ಗೂಡಿನ ಬಳ್ಳಿ ಕೈಕುಂಜೆ ಪಾಣೆಮಂಗಳೂರು ಬರಲಿಯ ತಲಪಾಡಿ ಮುಂತಾದ ಸುಮಾರು 20ಕ್ಕೂ ಅಧಿಕ ಕಡೆಗಳಲ್ಲಿ ಮೋರಿ ಮತ್ತು ಕಾಲುವೆಗಳ ಮೂಲಕ ಕುಡಿಯುವ ನೀರಿಗೆ ಕೊಳಚೆ ನೀರು ಸೇರುತ್ತಿದೆ. ಜೊತೆಗೆ ವಸತಿ ಸಮುಚ್ಛಯಗಳ ಶೌಚಾಲಯಗಳ ನೀರು, ಹೋಟೆಲ್ ತ್ಯಾಜ್ಯಗಳು, ಕೋಳಿ ಸಹಿತ ಮಾಂಸದ ಅಂಗಡಿಗಳ ಕೊಳಚೆ ನೀರು ನದಿ ಸೇರುತ್ತಿದೆ. ನಾವು ಕೆಲವರು ಬಂಟ್ವಾಳದ ಎರಡು ಮೂರು ಕಡೆಗಳಲ್ಲಿ ಹೋಗಿ ಕೊಳಚೆ ನೀರು ನೇತ್ರಾವತಿ ನದಿ ಸೇರುವುದನ್ನು ಕಂಡಿರುತ್ತೇವೆ. ಇದು ನಿಜವಾಗಿಯೂ ಬಹಳ ಆತಂಕಕಾರಿ ಸಂಗತಿ. ಮಂಗಳೂರು ನಗರ ಬೆಳೆಯುತ್ತಿದ್ದು, ಸುಮಾರು ಎಂಟು ಲಕ್ಷ ನಾಗರಿಕರಿದ್ದು ಇಂತಹ ಪರಿಸ್ಥಿತಿಯಲ್ಲಿ ಮುಂದಿನ ದಿನಗಳಲ್ಲಿ ಜನರ ಆರೋಗ್ಯದಲ್ಲಿ ನೇರ ಪರಿಣಾಮವಾಗಬಹುದು. ನೇತ್ರಾವತಿ ನೀರಿಗೆ ಕೊಳಚೆ ನೀರು ಸೇರುವುದರಿಂದ ಬಹುಶ ನದಿ ನೀರನ್ನು ಎರಡೆರಡು ಸಲ ಶುದ್ಧೀಕರಿಸಬಹುದು. ಆದರೆ, ಕೊಳೆಕೆ ನೀರು ನೇತ್ರಾವತಿ ನದಿಯ ಮಡಿಲು ಸೇರುವುದರಿಂದ ನಾಗರಿಕರಿಗೆ ತಾವು ಕುಡಿಯುವ ನೀರು ಕೊಳಚೆ ನೀರು ಎಂದು ಮನಪಟಲದಲ್ಲಿ ನಿಲ್ಲುತ್ತದೆ. ಈಗಾಗಲೇ ಸಾಕಷ್ಟು ಚರ್ಚೆಗಳು ಈ ಕುರಿತು ನಡೆದಿದ್ದು, ಕೊಳಚೆ ನೀರು ತ್ಯಾಜ್ಯ ಸೇರುವುದು ಇನ್ನು ನಿಂತಿಲ್ಲ. ಜನರ ಹಿತ ದೃಷ್ಟಿಯಿಂದ ಮತ್ತು ಉತ್ತಮ ಆರೋಗ್ಯದ ದೃಷ್ಟಿಯಿಂದ ಜನನಾಯಕರು ಮತ್ತು ಹಿರಿಯ ಅಧಿಕಾರಿಗಳು ಸೇರಿ ಬಂಟ್ವಾಳ ಮತ್ತು ಆಸುಪಾಸಿನಲ್ಲಿ ನದಿ ಸೇರುವಂತಹ ಕೊಳಚೆ ನೀರು ಮತ್ತು ತ್ಯಾಜ್ಯವನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ಕುರಿತು ಪರಿಹಾರವನ್ನೂ ಅವರ ತಂಡ ಸೂಚಿಸಿದ್ದು, ಬಂಟ್ವಾಳ ಮತ್ತು ಆಸುಪಾಸಿನ ಪ್ರದೇಶಗಳನ್ನು ಸಂಪೂರ್ಣವಾಗಿ ಒಳಚರಂಡಿ ವ್ಯವಸ್ಥೆಗೆ ಒಳಪಡಿಸುವುದು ಅಥವಾ ದೊಡ್ಡ ದೊಡ್ಡ ಇಂಗು ಗುಂಡಿಗಳನ್ನು ಮಾಡಿ ಕೊಳಚೆ ನೀರು ಮತ್ತು ತ್ಯಾಜ್ಯಗಳನ್ನು ಅದಕ್ಕೆ ಬಿಡುವುದು ಜೊತೆಗೆ ನೇತ್ರಾವತಿ ನದಿ ನೀರು ಕಲುಷಿತವಾಗದಂತೆ ನೋಡುವುದು ಎಂದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…