ಬದಿಯಡ್ಕ: ಕ್ಯಾನ್ಸರ್ ರೋಗ ಬಾಧಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಂಡಿತ್ತಡ್ಕ ಶಾಲೆಯ ಅಧ್ಯಾಪಕ ಪ್ರಶಾಂತ್ ರೈ (41) ನಿಧನರಾದರು. ಇಂದು (ಶನಿವಾರ) ಬೆಳಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಇವರು ಬದಿಯಡ್ಕ ಪಿಲಾ೦ಕಟ್ಟೆ ನಿವಾಸಿಯಾಗಿದ್ದಾರೆ.
ಅಧ್ಯಾಪಕರಾಗಿದ್ದ ವೇಳೆ ಅವರಿಗೆ ಕ್ಯಾನ್ಸರ್ ಬಾಧಿಸಿದ್ದು ಚಿಕಿತ್ಸೆ ನಡೆಸಲಾಗಿತ್ತು. ಈ ಮಧ್ಯೆ ಇವರ ಚಿಕಿತ್ಸೆಗಾಗಿ ಸಮಿತಿ ರಚಿಸಿ ಹಣ ಸಂಗ್ರಹವೂ ಮಾಡಲಾಗಿತ್ತು. ಆಟೋ ರಿಕ್ಷಾ ಚಾಲಕರು, ಬಸ್ಸು ಸಿಬಂದಿಗಳು ಅವರಿಗಾಗಿ ಕಾರುಣ್ಯ ಯಾತ್ರೆ ನಡೆಸಿ ಹಣ ಸಂಗ್ರಹ ಮಾಡಿದ್ದರು. ಈ ಮಧ್ಯೆ ಅವರು ಕೊನೆಯುಸಿರೆಳೆದಿರುವುದು ಅಭಿಮಾನಿ ಬಳಗಕ್ಕೆ ಶಾಕ್ ಆಗಿದೆ. ಮೃತರು ತಂದೆ ರಾಮ ಮಾಸ್ತರ್, ತಾಯಿ ಸರಳ, ಪತ್ನಿ ದಿವ್ಯ, ಮಕ್ಕಳಾದ ಮನಸ್ತಿ ಅನುಶ್ರೀ, ಸಹೋದರ ಗುರುಪ್ರಸಾದ್ ರೈ (ಶಿಕ್ಷಕರು,ಪಳ್ಳತ್ತಡ್ಕ ಶಾಲೆ) ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…