ಬದಿಯಡ್ಕ: ಕ್ಯಾನ್ಸರ್ ರೋಗ ಬಾಧಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಂಡಿತ್ತಡ್ಕ ಶಾಲೆಯ ಅಧ್ಯಾಪಕ ಪ್ರಶಾಂತ್ ರೈ (41) ನಿಧನರಾದರು. ಇಂದು (ಶನಿವಾರ) ಬೆಳಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಇವರು ಬದಿಯಡ್ಕ ಪಿಲಾ೦ಕಟ್ಟೆ ನಿವಾಸಿಯಾಗಿದ್ದಾರೆ.
ಅಧ್ಯಾಪಕರಾಗಿದ್ದ ವೇಳೆ ಅವರಿಗೆ ಕ್ಯಾನ್ಸರ್ ಬಾಧಿಸಿದ್ದು ಚಿಕಿತ್ಸೆ ನಡೆಸಲಾಗಿತ್ತು. ಈ ಮಧ್ಯೆ ಇವರ ಚಿಕಿತ್ಸೆಗಾಗಿ ಸಮಿತಿ ರಚಿಸಿ ಹಣ ಸಂಗ್ರಹವೂ ಮಾಡಲಾಗಿತ್ತು. ಆಟೋ ರಿಕ್ಷಾ ಚಾಲಕರು, ಬಸ್ಸು ಸಿಬಂದಿಗಳು ಅವರಿಗಾಗಿ ಕಾರುಣ್ಯ ಯಾತ್ರೆ ನಡೆಸಿ ಹಣ ಸಂಗ್ರಹ ಮಾಡಿದ್ದರು. ಈ ಮಧ್ಯೆ ಅವರು ಕೊನೆಯುಸಿರೆಳೆದಿರುವುದು ಅಭಿಮಾನಿ ಬಳಗಕ್ಕೆ ಶಾಕ್ ಆಗಿದೆ. ಮೃತರು ತಂದೆ ರಾಮ ಮಾಸ್ತರ್, ತಾಯಿ ಸರಳ, ಪತ್ನಿ ದಿವ್ಯ, ಮಕ್ಕಳಾದ ಮನಸ್ತಿ ಅನುಶ್ರೀ, ಸಹೋದರ ಗುರುಪ್ರಸಾದ್ ರೈ (ಶಿಕ್ಷಕರು,ಪಳ್ಳತ್ತಡ್ಕ ಶಾಲೆ) ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…