ಜನ ಮನದ ನಾಡಿ ಮಿಡಿತ

Advertisement

ವಕೀಲರ ಸಂಘ (ರಿ), ಬಂಟ್ವಾಳದ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ ರವರು ಮರು ಆಯ್ಕೆ

ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ  ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ ರವರು ಸ್ಪರ್ದಿಸಿದ್ದು, ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮರು ಆಯ್ಕೆ ಯಾಗಿರುತ್ತಾರೆ.


ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ರವರು ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ ರವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ರವರು ಉಪ ಚುನಾವಣಾ ಧಿಕಾರಿಗಳಾಗಿ ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯ ರವರ ಮೇಲುಸ್ತುವಾರಿ ಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!