ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಇಂದಿನಿಂದ ( ಮೇ 5) ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ

ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.

 

ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.ಜಿಲ್ಲೆಯ ಮಾಸ್ಟ‌ರ್ ಟ್ರೈನರ್‌ಗಳಿಂದ 35 ತಾಲೂಕು ಮಟ್ಟದ ಟ್ರೈನರ್‌ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. .
ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!