ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಇಂದಿನಿಂದ ( ಮೇ 5) ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ

ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.

 

ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.ಜಿಲ್ಲೆಯ ಮಾಸ್ಟ‌ರ್ ಟ್ರೈನರ್‌ಗಳಿಂದ 35 ತಾಲೂಕು ಮಟ್ಟದ ಟ್ರೈನರ್‌ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. .
ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!