ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.
ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.ಜಿಲ್ಲೆಯ ಮಾಸ್ಟರ್ ಟ್ರೈನರ್ಗಳಿಂದ 35 ತಾಲೂಕು ಮಟ್ಟದ ಟ್ರೈನರ್ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. .
ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…