ಕರಾವಳಿ

ಮಂಗಳೂರು: ಹೆಡ್‌ ಕಾನ್‌ಸ್ಟೇಬಲ್ ರಶೀದ್ ತನಿಖೆಯಾದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿಂದಿನ ರಹಸ್ಯ ಬಯಲು- ಕೆ.ಟಿ.ಉಲ್ಲಾಸ್ ಆಗ್ರಹ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಠಾಣಾ ಹೆಡ್‌ ಕಾನ್‌ಸ್ಟೇಬಲ್ ರಶೀದ್ ಕೂಡಾ ಸೇರಿದ್ದಾರೆ ಎಂಬ ಶಂಕೆ ಬಲವಾಗಿದೆ. ಆದ್ದರಿಂದ ರಶೀದ್‌ರನ್ನು ತನಿಖೆಗೊಳಪಡಿಸಿದರೆ, ಇದರ ಹಿಂದಿರುವ ಪೂರ್ಣ ಮಾಹಿತಿ ದೊರೆಯಲು ಸಾಧ್ಯ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ.ಉಲ್ಲಾಸ್ ಆಗ್ರಹಿಸಿದರು.

ಕದ್ರಿಯ ವಿಶ್ವಶ್ರೀಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ರಶೀದ್ ಪದೇಪದೇ ಸುಹಾಸ್ ಶೆಟ್ಟಿಗೆ ಕರೆ ಮಾಡಿ ಹಿಂಸೆ ಕೊಡುತ್ತಿದ್ದ ಎಂದು ಆತನ ಸ್ನೇಹಿತರು ಹೇಳುತ್ತಿದ್ದಾರೆ. ಕೊಲೆಗೆ ಮೂರು ದಿನಕ್ಕೆ ಮೊದಲು ಎಸಿಪಿಯವರು ಸುಹಾಸ್ ಶೆಟ್ಟಿಯನ್ನು ಕರೆದು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡಿದ್ದಲ್ಲಿ ಕೇಸ್ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆತನಲ್ಲಿ ಶಸ್ತ್ರಾಸ್ತ್ರಗಳು ಇಲ್ಲ ಎಂಬ ಸುದ್ದಿ ಕೊಲೆ ಆರೋಪಿಗಳಿಗೆ ಹೇಗೆ ಗೊತ್ತಾಗಿದೆ. ಈ ಮಾಹಿತಿ ರಶೀದ್‌ನಿಂದಲೇ ಆರೋಪಿಗಳಿಗೆ ಸಿಕ್ಕಿದೆ ಎಂದು ಅವರು ಆರೋಪಿಸಿದರು.

ಸುಹಾಸ್ ಶೆಟ್ಟಿ ಕೊಲೆ ಫಾಝಿಲ್ ಕೊಲೆಗೆ ಪ್ರತಿಕಾರವಲ್ಲ. ಇದರಲ್ಲಿ ಫಾಝಿಲ್ ತಮ್ಮ ಅದಿಲ್ ಮಾತ್ರವಲ್ಲ, ನಿಷೇಧಿತ ಪಿಎಫ್ಐ ಸಂಘಟನೆ 50ಲಕ್ಷಕ್ಕೂ ಅಧಿಕ ಹಣಕಾಸು ನೆರವು ನೀಡಿದೆ ಎಂಬ ಬಲವಾದ ಅನುಮಾನವಿದೆ. ಕೊಲೆಯ ಬಳಿಕ ಆರೋಪಿಗಳು ಯಾವ ಆತುರವಿಲ್ಲದೆ ಕಾರು ಹತ್ತಿ ಹೋಗಿದ್ದಾರೆ. ಕೊಲೆ ನಡೆದ ಸಂದರ್ಭ ಅಲ್ಲಿದ್ದವರೆಲ್ಲಾ ಇವರದ್ದೇ ಜನ ಆಗಿರಬೇಕು. ಆದ್ದರಿಂದ ಅವರಿಗೆ ಅಷ್ಟು ಆತ್ಮವಿಶ್ವಾಸ ಬಂದಿತ್ತು ಎಂದರು.

ಈ ಹಿಂದೆ ನಡೆದ ಪ್ರಶಾಂತ ಪೂಜಾರಿ, ಸುಖಾನಂದ ಶೆಟ್ಟಿ ಹತ್ಯೆಯಲ್ಲಿ ಪಿಎಫ್ಐ ಸಂಘಟನೆಯ ಕೈವಾಡವಿತ್ತು, ಹಣಕಾಸು ನೆರವು ನೀಡಿತ್ತು. ಅದೇ ರೀತಿ ಈ ಪ್ರಕರಣದಲ್ಲೂ ಪಿಎಫ್ಐನ ಕೈವಾಡವಿದೆ‌ ಬಲವಾದ ಶಂಕೆಯಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ರಂಜಿತ್ ಮತ್ತು ನಾಗರಾಜ್ ಇಬ್ಬರಿಗೂ ಸುಹಾಸ್ ಶೆಟ್ಟಿ ಯಾರು ಎಂದು ಗೊತ್ತಿಲ್ಲ. ಅವರಿಗೆ ಸುಹಾಸ್ ಶೆಟ್ಟಿ ಮೇಲೆ ಯಾವ ವಿರೋಧವೂ ಇಲ್ಲ. ಅಪರಾಧ ಚಟುವಟಿಕೆ ಹಿನ್ನೆಲೆಯವರೂ ಅಲ್ಲ. ಈ ಕೇಸ್‌ನಲ್ಲಿ ಹಿಂದೂಗಳು ಇರಬೇಕೆಂದು ಅವರಿಬ್ಬರನ್ನು ಬಳಸಿದ್ದಾರೆ. ಪಿಎಫ್ಐ ಬ್ಯಾನ್ ಆದ ಬಳಿಕ ಇಂತಹ ಕೃತ್ಯವನ್ನು ನೆರವಾಗಿ ಮಾಡದೇ ಹಿಂದೂಗಳಲ್ಲಿ ಮಾಡಿಸುತ್ತಿದ್ದಾರೆ. ಪ್ರಕರಣ ಎನ್ಐಎಗೆ ಹೋಗದಂತೆ ಹಿಂದೂಗಳನ್ನು ಬಳಸುತ್ತಿದ್ದಾರೆ‌. ಆದ್ದರಿಂದ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

20 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

1 day ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

1 day ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

3 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

3 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

3 days ago