ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆ ಮದ್ಯ

ರಾಜ್ಯದಲ್ಲಿ ಬಿಯರ್​ ಬೆಲೆ ಹೆಚ್ಚಿದ ಬೆನ್ನಲ್ಲೇ ಇದೀಗ ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ಮುಂದಾಗಿದೆ.

ಐಎಂಎಲ್ ಮೇಲಿನ ದರ ಏರಿಕೆ ಆಗಲಿದ್ದು, ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದೆ. ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ವರದಿ ಆಗಿದೆ.

2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38,600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ ನಲ್ಲಿ 40 ಸಾವಿರ ಕೋಟಿ ಟಾರ್ಗೆಟ್ ನೀಡಲಾಗಿದೆ. ಈ ಟಾರ್ಗೆಟ್ ಮುಟ್ಟುವ ಸಲುವಾಗಿ ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಈ ವಾರದಿಂದಲೇ ಎಲ್ಲಾ ರೀತಿಯ ಮದ್ಯಗಳ ಮೇಲೆ ಶೇ 10 ರಷ್ಟು ಬೆಲೆ ಏರಿಕೆ ಆಗಲಿದೆ. ಈಗಾಗಲೇ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೂಡ ನೀಡಿದ್ದು, ದರ ಏರಿಕೆ ಫಿಕ್ಸ್ ಆಗಿದೆ. ಮದ್ಯಪ್ರಿಯರು ಮದ್ಯ ಕುಡಿಯಲು ಹೆಚ್ಚು ಹಣ ನೀಡಲೇಬೇಕಿದೆ.

ಮದ್ಯದ 16 ಸ್ಲ್ಯಾಬ್​ಗಳಲ್ಲಿ 1 ರಿಂದ 4 ಸ್ಲ್ಯಾಬ್​ಗಳ ಮೇಲೆ ದರ ಏರಿಕೆ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದ್ದು, ಸ್ಯ್ಲಾಬ್-1, ಸದ್ಯ 80 ರೂಪಾಯಿ ಇದ್ದು ಅದರ ಮೇಲೆ 10 ರೂಪಾಯಿ ಏರಿಕೆ ಆಗಲಿದೆ. ಸ್ಲ್ಯಾಬ್- 2, 155 ರೂಪಾಯಿ ಇದ್ದು ಅದರ ಮೇಲೆ 15 ರೂಪಾಯಿ ಏರಿಕೆ ಆಗಲಿದೆ.

ಒಂದು ಕ್ವಾರ್ಟರ್ ಮೇಲೆ 10 ರಿಂದ 25 ರೂಪಾಯಿವರೆಗೆ ದರ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದೆ. ಒಂದು ಫುಲ್ ಬಾಟಲ್ ಮೇಲೆ 50 ರಿಂದ 100 ರುಪಾಯಿ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ವರ್ಷ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಕೂಡ ಏರಿಕೆ ಆಗಿದೆ. ಇರದ ಜೊತೆಗೆ ಮದ್ಯ ಪ್ರಿಯರು ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಅಬಕಾರಿ ಇಲಾಖೆ ಸರ್ಕಾರ ಕೊಟ್ಟ ಟಾರ್ಗೆಟ್ ರೀಚ್​ ಮಾಡಲು ಈ ರೀತಿ ಪದೇ ಪದೇ ಮದ್ಯದ ಬೆಲೆ ಏರಿಕೆ ಮಾಡುವುದು ಸರಿಯಲ್ಲ ಎಂದು ಮದ್ಯಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!