ಜನ ಮನದ ನಾಡಿ ಮಿಡಿತ

Advertisement

ಭಗೀರಥ ಸಂಸ್ಥೆಯ ವತಿಯಿಂದ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು (ಗೋ ಕಟ್ಟೆ) ಪುನಶ್ಚೇತನ

ಹುಣಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಹುಣಸೂರು ತಾಲೂಕಿನ ಉಯ್ಯಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿರುವ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು ಪುನಶ್ಚೇತನ ಮಾಡಲು ಶ್ರಮದಾನದ ಮೂಲಕ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತೇಜೇಂದ್ರನಾಥ ವರಪ್ರಸಾದ ರವರು ಕಲ್ಯಾಣಿ ಸಾಕಷ್ಟು ವರ್ಷಗಳಿಂದ ಜನರಿಗೆ ಉಪಯೋಗವಾಗುತ್ತಿದ್ದು ಮತ್ತಷ್ಟು ಜನರಿಗೆ ಅನುಕೂಲವಾಗುವಂತೆ ಭಗಿರಥ ಸಂಸ್ಥೆಯು ಪುನಶ್ಚೇತನ ಮಾಡಿಕೊಡುತ್ತಿರುವುದು ತುಂಬಾ ಬಹಳ ಸಂತೋಷವಾದ ವಿಚಾರ ಎಂದು ತಿಳಿಸಿದರು ಹಾಗೂ ಜಿಲ್ಲಾ ತಂಡದ ನಾಯಕರಾದ ಮಹೇಶ್ ರವರು ಜಲಮೂಲಗಳು ಕುಂಠಿತಗೊಳ್ಳುತ್ತಿದ್ದು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಈ ಕಲ್ಯಾಣಿಯನ್ನು ಪುನಶ್ಚೇತನ ಮಾಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ತೇಜೇಂದ್ರ ವರಪ್ರಸಾದ್, ಪಂಚಾಯಿತಿಯ ಅಧ್ಯಕ್ಷರಾದ ದೇವರಾಜು, ಸದಸ್ಯರಾದ ರಾಧಾ ಮಂಜುಳಾ, ಆಯುಬ್ ಪಾಷಾ, ವ ಕ್ಬಾಲ್ ಪಾಷಾ, ಜಿಲ್ಲಾ ತಂಡದ ನಾಯಕರಾದ ಮಹೇಶ್, ತಾಲೂಕು ಸಂಯೋಜಕರಾದ ಆನಂದ್ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿಯ ನೌಕರರು ಹಾಗೂ ನೀರು ಗಂಟೆಗಳು ಮಹಿಳಾ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!