ಜನ ಮನದ ನಾಡಿ ಮಿಡಿತ

Advertisement

ಭಗೀರಥ ಸಂಸ್ಥೆಯ ವತಿಯಿಂದ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು (ಗೋ ಕಟ್ಟೆ) ಪುನಶ್ಚೇತನ

ಹುಣಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಹುಣಸೂರು ತಾಲೂಕಿನ ಉಯ್ಯಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿರುವ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು ಪುನಶ್ಚೇತನ ಮಾಡಲು ಶ್ರಮದಾನದ ಮೂಲಕ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತೇಜೇಂದ್ರನಾಥ ವರಪ್ರಸಾದ ರವರು ಕಲ್ಯಾಣಿ ಸಾಕಷ್ಟು ವರ್ಷಗಳಿಂದ ಜನರಿಗೆ ಉಪಯೋಗವಾಗುತ್ತಿದ್ದು ಮತ್ತಷ್ಟು ಜನರಿಗೆ ಅನುಕೂಲವಾಗುವಂತೆ ಭಗಿರಥ ಸಂಸ್ಥೆಯು ಪುನಶ್ಚೇತನ ಮಾಡಿಕೊಡುತ್ತಿರುವುದು ತುಂಬಾ ಬಹಳ ಸಂತೋಷವಾದ ವಿಚಾರ ಎಂದು ತಿಳಿಸಿದರು ಹಾಗೂ ಜಿಲ್ಲಾ ತಂಡದ ನಾಯಕರಾದ ಮಹೇಶ್ ರವರು ಜಲಮೂಲಗಳು ಕುಂಠಿತಗೊಳ್ಳುತ್ತಿದ್ದು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಈ ಕಲ್ಯಾಣಿಯನ್ನು ಪುನಶ್ಚೇತನ ಮಾಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ತೇಜೇಂದ್ರ ವರಪ್ರಸಾದ್, ಪಂಚಾಯಿತಿಯ ಅಧ್ಯಕ್ಷರಾದ ದೇವರಾಜು, ಸದಸ್ಯರಾದ ರಾಧಾ ಮಂಜುಳಾ, ಆಯುಬ್ ಪಾಷಾ, ವ ಕ್ಬಾಲ್ ಪಾಷಾ, ಜಿಲ್ಲಾ ತಂಡದ ನಾಯಕರಾದ ಮಹೇಶ್, ತಾಲೂಕು ಸಂಯೋಜಕರಾದ ಆನಂದ್ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿಯ ನೌಕರರು ಹಾಗೂ ನೀರು ಗಂಟೆಗಳು ಮಹಿಳಾ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!