ಹುಣಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಹುಣಸೂರು ತಾಲೂಕಿನ ಉಯ್ಯಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿರುವ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು ಪುನಶ್ಚೇತನ ಮಾಡಲು ಶ್ರಮದಾನದ ಮೂಲಕ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತೇಜೇಂದ್ರನಾಥ ವರಪ್ರಸಾದ ರವರು ಕಲ್ಯಾಣಿ ಸಾಕಷ್ಟು ವರ್ಷಗಳಿಂದ ಜನರಿಗೆ ಉಪಯೋಗವಾಗುತ್ತಿದ್ದು ಮತ್ತಷ್ಟು ಜನರಿಗೆ ಅನುಕೂಲವಾಗುವಂತೆ ಭಗಿರಥ ಸಂಸ್ಥೆಯು ಪುನಶ್ಚೇತನ ಮಾಡಿಕೊಡುತ್ತಿರುವುದು ತುಂಬಾ ಬಹಳ ಸಂತೋಷವಾದ ವಿಚಾರ ಎಂದು ತಿಳಿಸಿದರು ಹಾಗೂ ಜಿಲ್ಲಾ ತಂಡದ ನಾಯಕರಾದ ಮಹೇಶ್ ರವರು ಜಲಮೂಲಗಳು ಕುಂಠಿತಗೊಳ್ಳುತ್ತಿದ್ದು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಈ ಕಲ್ಯಾಣಿಯನ್ನು ಪುನಶ್ಚೇತನ ಮಾಡುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ತೇಜೇಂದ್ರ ವರಪ್ರಸಾದ್, ಪಂಚಾಯಿತಿಯ ಅಧ್ಯಕ್ಷರಾದ ದೇವರಾಜು, ಸದಸ್ಯರಾದ ರಾಧಾ ಮಂಜುಳಾ, ಆಯುಬ್ ಪಾಷಾ, ವ ಕ್ಬಾಲ್ ಪಾಷಾ, ಜಿಲ್ಲಾ ತಂಡದ ನಾಯಕರಾದ ಮಹೇಶ್, ತಾಲೂಕು ಸಂಯೋಜಕರಾದ ಆನಂದ್ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿಯ ನೌಕರರು ಹಾಗೂ ನೀರು ಗಂಟೆಗಳು ಮಹಿಳಾ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…