ಹುಣಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಹುಣಸೂರು ತಾಲೂಕಿನ ಉಯ್ಯಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿರುವ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು ಪುನಶ್ಚೇತನ ಮಾಡಲು ಶ್ರಮದಾನದ ಮೂಲಕ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತೇಜೇಂದ್ರನಾಥ ವರಪ್ರಸಾದ ರವರು ಕಲ್ಯಾಣಿ ಸಾಕಷ್ಟು ವರ್ಷಗಳಿಂದ ಜನರಿಗೆ ಉಪಯೋಗವಾಗುತ್ತಿದ್ದು ಮತ್ತಷ್ಟು ಜನರಿಗೆ ಅನುಕೂಲವಾಗುವಂತೆ ಭಗಿರಥ ಸಂಸ್ಥೆಯು ಪುನಶ್ಚೇತನ ಮಾಡಿಕೊಡುತ್ತಿರುವುದು ತುಂಬಾ ಬಹಳ ಸಂತೋಷವಾದ ವಿಚಾರ ಎಂದು ತಿಳಿಸಿದರು ಹಾಗೂ ಜಿಲ್ಲಾ ತಂಡದ ನಾಯಕರಾದ ಮಹೇಶ್ ರವರು ಜಲಮೂಲಗಳು ಕುಂಠಿತಗೊಳ್ಳುತ್ತಿದ್ದು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಈ ಕಲ್ಯಾಣಿಯನ್ನು ಪುನಶ್ಚೇತನ ಮಾಡುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ತೇಜೇಂದ್ರ ವರಪ್ರಸಾದ್, ಪಂಚಾಯಿತಿಯ ಅಧ್ಯಕ್ಷರಾದ ದೇವರಾಜು, ಸದಸ್ಯರಾದ ರಾಧಾ ಮಂಜುಳಾ, ಆಯುಬ್ ಪಾಷಾ, ವ ಕ್ಬಾಲ್ ಪಾಷಾ, ಜಿಲ್ಲಾ ತಂಡದ ನಾಯಕರಾದ ಮಹೇಶ್, ತಾಲೂಕು ಸಂಯೋಜಕರಾದ ಆನಂದ್ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿಯ ನೌಕರರು ಹಾಗೂ ನೀರು ಗಂಟೆಗಳು ಮಹಿಳಾ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…