ಬಂಟ್ವಾಳ ಸಮೀಪದ ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದೆ ಎನ್ನಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗದೇ ಇದ್ದು, ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೊಲೀಸ್ ಪ್ರಕಟಣೆ ತಿಳಿಸಿದೆ.



