ಮಂಗಳೂರು: ಜಿಲ್ಲೆಯ ಖ್ಯಾತ ನಾಟಕಕಾರ, ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ‘ದೇವರೆ ತೀರ್ಪು’, ‘ಆರ್ ಅತ್ ಈರ್’, ‘ಕೈಕೊರ್ಪೆರ್’, ‘ಬಲಿಪಡೆ ಉಂತುಲೆ’, ‘ಎಂಕುಲತ್ ನಿಕುಲು’,’ಎಂಕುಲ್ ಎನ್ನಿಲೆಕ ಅತ್’, ಆರ್ ಅತ್ ಈರ್, ‘ಡಿಸೆಂಬರ್ -1’ ಸೇರಿದಂತೆ 20ಕ್ಕೂ ಅಧಿಕ ತುಳು ನಾಟಕಗಳನ್ನು ಬರೆದು ನಿರ್ದೇಶಿಸಿದ್ದರು. ಇವರು ಬರೆದು ನಿರ್ದೇಶಿಸಿದ ದೇವೆರೆ ತೀರ್ಪು ನಾಟಕಕ್ಕೆ ಜಿಲ್ಲಾಮಟ್ಟದ ಪ್ರಶಸ್ತಿ ಲಭಿಸಿತ್ತು. ಮಂಗಳೂರಿನ ಪುರಭವನದಲ್ಲಿ ಹಲವು ಬಾರಿ ಪ್ರದರ್ಶನಗೊಂಡಿತ್ತು. ‘ಕೈಕೊರ್ಪೆರ್’ ನಾಟಕ ಬೆಳ್ತಂಗಡಿಯ ಪೂಂಜಾಲಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನ ಕಂಡು ಪ್ರಶಸ್ತಿಯನ್ನು ಪಡೆದುಕೊಂಡಿತ್ತು.’ಬಲಿಪಡೆ ಉಂತುಲೆ’ 40 ಪ್ರದರ್ಶನಗಳನ್ನು ಕಂಡಿತ್ತು. ಶರವು ಕಲಾವಿದರು ನಟಿಸಿದ ನವ ನೀತ್ ಶೆಟ್ಟಿ ಕದ್ರಿ ರಚಿಸಿದ ಕಾರ್ನಿಕದ ಶನೀಶ್ವರೆ ನಾಟಕವನ್ನು ಗಿರೀಶ್ ಪಿಲಾರ್ ನಿರ್ದೇಶಿಸಿ ಯಶಸ್ವಿ 30 ಪ್ರದರ್ಶನವಾಗಿತ್ತು. ದಿನೇಶ್ ಕಂಕನಾಡಿ ಇವರ ನಾಟಕ ‘ಮಾಷ್ಟ್ರದಾನೆ ಮನಿಪುಜೆರ್’ ನಾಟಕದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹಲವು ನಾಟಕಗಳಲ್ಲಿ ಸ್ತ್ರೀ ಪಾತ್ರಧಾರಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಕಿರುತೆರೆಯಲ್ಲಿ ನಟಿಸಿದ್ದ ಗಿರೀಶ್ ಇವರು ನಟಿಸಿದ್ದ ಪುಂಡಿ ಪಣವು ಧಾರವಾಹಿ ದೂರದರ್ಶನ ಸೇರಿದಂತೆ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರವಾಗುತ್ತಿತ್ತು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…