ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ದೇಶಾದ್ಯಂತ ನಾಳೆ ಮಾಕ್ ಡ್ರಿಲ್; ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್​ ಗಡಿಯಲ್ಲಿ ಸೇನೆ ಮಾಕ್​ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್​ ಡ್ರಿಲ್​​ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.

ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್​ ಡ್ರಿಲ್​​ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.

ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.

ರಾಜ್ಯದ ವಿಚಾರಕ್ಕೆ ಬಂದಾಗ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು, ಕಾರವಾರ ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು. ಕಾರವಾರದಲ್ಲಿ ನೌಕಾನೆಲೆ ಇರುವುದರಿಂದ ಮ್ಯಾಕ್ ಡ್ರಿಲ್ ಅವಶ್ಯಕತೆ ಇದೆ ಎಂದು ಕೇಂದ್ರ ಚಿಂತಿಸಿದೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!