ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್ ಗಡಿಯಲ್ಲಿ ಸೇನೆ ಮಾಕ್ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.
ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್ ಡ್ರಿಲ್ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.
ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.
ರಾಜ್ಯದ ವಿಚಾರಕ್ಕೆ ಬಂದಾಗ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು, ಕಾರವಾರ ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು. ಕಾರವಾರದಲ್ಲಿ ನೌಕಾನೆಲೆ ಇರುವುದರಿಂದ ಮ್ಯಾಕ್ ಡ್ರಿಲ್ ಅವಶ್ಯಕತೆ ಇದೆ ಎಂದು ಕೇಂದ್ರ ಚಿಂತಿಸಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…