ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್ ಗಡಿಯಲ್ಲಿ ಸೇನೆ ಮಾಕ್ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.
ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್ ಡ್ರಿಲ್ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.
ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.
ರಾಜ್ಯದ ವಿಚಾರಕ್ಕೆ ಬಂದಾಗ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು, ಕಾರವಾರ ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು. ಕಾರವಾರದಲ್ಲಿ ನೌಕಾನೆಲೆ ಇರುವುದರಿಂದ ಮ್ಯಾಕ್ ಡ್ರಿಲ್ ಅವಶ್ಯಕತೆ ಇದೆ ಎಂದು ಕೇಂದ್ರ ಚಿಂತಿಸಿದೆ.
ಕಾರವಾರ - ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…