ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್ ಗಡಿಯಲ್ಲಿ ಸೇನೆ ಮಾಕ್ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.
ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್ ಡ್ರಿಲ್ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.
ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.
ರಾಜ್ಯದ ವಿಚಾರಕ್ಕೆ ಬಂದಾಗ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು, ಕಾರವಾರ ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು. ಕಾರವಾರದಲ್ಲಿ ನೌಕಾನೆಲೆ ಇರುವುದರಿಂದ ಮ್ಯಾಕ್ ಡ್ರಿಲ್ ಅವಶ್ಯಕತೆ ಇದೆ ಎಂದು ಕೇಂದ್ರ ಚಿಂತಿಸಿದೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…